ಪರಿಚಯದವರು ಸಿಕ್ಕರೆಂದು ಮಾತಾಡುತ್ತಾ ರಸ್ತೆಯಲ್ಲಿ ಬರುತ್ತಿದ್ದವಳಿಗೆ ರಸ್ತೆ ಬದಿಗೆ ಸತ್ತು ಬಿದ್ದು ಕೊಳೆತು ನಾರುತ್ತಿದ್ದ ಬೀದಿ ನಾಯಿಯ ವಾಸನೆ ಬರಲೇ ಇಲ್ಲ...
ಪರೀಕ್ಷೆಯಲ್ಲಿ ಫೇಲಾದೆನೆಂದು ಗುಡ್ಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಹೊರಟ ಅವನಿಗೆ ಬೆಟ್ಟ ಹತ್ತುವುದೇ ಕಷ್ಟವಾಗಿ ವಾಪಾಸು ಮನೆಗೆ ಮರಳಿದ...
ಪತ್ರದ ಮೂಲಕವೇ ನಡೆಯುತ್ತಿದ್ದ ಪ್ರೇಮ ವ್ಯವಹಾರ ಎಲ್ಲರಿಗೂ ತಿಳಿಯುತ್ತದೆ ಎಂಬ ಭಯದಿಂದ ಅದನ್ನು ನಿಲ್ಲಿಸಿ ಅವರಿಬ್ಬರೂ ಒಂದು ದಿನ ಮನೆ ಬಿಟ್ಟು ಓಡಿ ಹೋದರು..
ಆಫೀಸಿನ ಕೆಲಸ ಮುಗಿಸಿ ವಾಪಾಸ್ ಬರುತ್ತಿದ್ದವನಿಗೆ ಸಿನಿಮಾಗೆ ಹೋಗಲು ಕಾಯುತ್ತೇನೆ ಎಂದ ಹೆಂಡತಿಯ ನೆನಪಾಗಿ ಮನೆಯ ದಾರಿ ತಪ್ಪಿಹೋಯಿತು...
ಕೈಗೆ ಪೆಟ್ಟು ಬಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತಕ್ಕೀಡಾದುದರಿಂದ ರೋಗಿಯೂ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ...
ಗಂಡನ ಕಾಟದಿಂದ ಕಣ್ಣಿರಲ್ಲೇ ಮೀಯುತ್ತಿಇರುವ ಸೊಸೆಯ ಕಷ್ಟ ನೋಡಲಾಗದೆ ಅತ್ತೆ ಒಂದು ದಿನ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದಳು...
ಸಾಹುಕಾರರಿಗೆ ಬಾಕಿ ಕೊಡಬೇಕಿದ್ದ ಸಾಲಕ್ಕೆ ಪ್ರತಿಯಾಗಿ ಜೀತ ಮಾಡಲೊಪ್ಪಿದ ಆತನಿಗೆ ಸಾಹುಕಾರರನ್ನು ಹೊಡೆಯುವ ಶಕ್ತಿ ಕೊನೆವರೆಗೂ ಬರಲೇ ಇಲ್ಲ...
No comments:
Post a Comment